ನೆಲ್ಯಾಡಿ ಬಾಲ ಯೇಸು ದೇವಾಲಯದಲ್ಲಿ ಕ್ರೈಸ್ತ ಶಿಕ್ಷಣ ದಿನ ಆಚರಣೆ ಮಾರ್ಚ್
ಸಂತ ಜೋನರ ದೇವಾಲಯ, ಕೊಕ್ಕಡಕ್ಕೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ದಿನಾಂಕ 31-01-2026 ಮತ್ತು 01-02-2026 ರಂದು ಅಧಿಕೃತ ಭೇಟಿಯನ್ನು ನೀಡಿದರು.
ನೆಲ್ಯಾಡಿ ಬಾಲಯೇಸು ದೇವಾಲಯದ ವಾರ್ಷಿಕ ಹಬ್ಬ ಜನವರಿ 14 ರಂದು ವಿಜೃಂಭಣೆಯಿಂದ ಆಚರಿಸಲಾಯಿತು.
ಮಂಗಳೂರು, ಡಿ. 22 ನವ ಮಂಗಳೂರು ಬಂದರು ಪ್ರಾಧಿಕಾರ (NMPA) 2025–26ರ ಕ್ರೂಸ್ ಋತುವಿನ ಆರಂಭಕ್ಕೆ ಅಧಿಕೃತ ಚಾಲನೆ ನೀಡಿದ್ದು, ಮೊದಲ ಐಷಾರಾಮಿ ಕ್ರೂಸ್ ಹಡಗು ಎಂಎಸ್ ಸೆವೆನ್ ಸೀಸ್ ನ್ಯಾವಿಗೇಟರ್ ಶನಿವಾರ ಮಂಗಳೂರಿಗೆ ಆಗಮಿಸಿದೆ. ಹಡಗು ಬೆಳಿಗ್ಗೆ 6.15ಕ್ಕೆ ಬಂದರು ತಲುಪಿದ್ದು, 7.15ಕ್ಕೆ ಬರ್ತ್ ಸಂಖ್ಯೆ-4ರಲ್ಲಿ ಲಂಗರು ಹಾಕಿತು.
ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಕೆ ಇವರು ಮಾತನಾಡುತ್ತಾ "1949ರ ನವಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಇವರ ನಾಯಕತ್ವದಲ್ಲಿ ಸಂವಿಧಾನವು ಮೂಡಿಬಂದಿದೆ. ಈ ಸಂವಿಧಾನದ ಕಾರಣದಿಂದಾಗಿ ನನ್ನ ರಾಷ್ಟ್ರವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಾವೆಲ್ಲರೂ ಕೂಡ ಸಂವಿಧಾನದ ಅಧ್ಯಯನವನ್ನು ಮಾಡಬೇಕು." ಎಂದು ಹೇಳಿದರು. ಬಳಿಕ ಸಾಮೂಹಿಕವಾಗಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕಿಯರಾದ ಶ್ರೀಮತಿ ಲಾವಣ್ಯ, ಶ್ರೀಮತಿ ಶ್ರೀನಿಧಿ ಮತ್ತು ಕುಮಾರಿ ಸ್ನೇಹ ಉಪಸ್ಥಿತರಿದ್ದರು. ಉಪನ್ಯಾಸಕ ಚೇತನ್ ಎಂ ಸಹಕರಿಸಿದರು.
ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ 14 ನವೆಂಬರ್ 2025 ರಂದು ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭ ಮತ್ತು ಮಕ್ಕಳ ದಿನಾಚರಣೆ ಭವ್ಯವಾಗಿ ಜರುಗಿತು. ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಪಾಲಕರು ಸಾಕ್ಷಿಯಾದರು.
ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿವಸದ ಪ್ರಯುಕ್ತ ಪ್ರತಿಜ್ಞೆ ಸ್ವೀಕಾರದ ಕಾರ್ಯಕ್ರಮವು ನಡೆಯಿತು
ಉಪ್ಪಿನಂಗಡಿ: ಇಲ್ಲಿನ ಕೂಟೇಲು ಸೇತುವೆಯ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರೊಂದು ಬೈಕ್ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ವಿದ್ಯಾರ್ಥಿಗಳಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅ.14ರಂದು ನಡೆದಿದೆ.
ರಾಷ್ಟ್ರೀಯ ಸೇವಾ ಯೋಜನೆಯು ಯುವಜನರಲ್ಲಿ ಸೇವಾ ಮನೋಭಾವವನ್ನು ಮೂಡಿಸುತ್ತದೆ. ಇದರಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆ ಸಹಜವಾಗಿ ಬರುತ್ತದೆ.
ಕೊಕ್ಕಡ :ಸಂತ ಜೋನರ ದೇವಾಲಯ ಕೌಕ್ರಾಡಿ ಕೊಕ್ಕಡ ದಲ್ಲಿ ಮಾತೆ ಮರಿಯಮ್ಮರವರ ಜನುಮ ದಿನ ಆಚರಣೆ ಮತ್ತು ತೆನೆ ಹಬ್ಬ ವಿಜೃಂಭಣೆಯಿಂದ ನಡೆಯಿತು.
ನೆಲ್ಯಾಡಿ : ಮೇರಿ ಮಾತೆಯ ಜನ್ಮದಿನದ ಅಂಗವಾಗಿ ಬಾಲಯೇಸು ದೇವಾಲಯದಲ್ಲಿ ಸಂಭ್ರಮದ ಬಲಿಪೂಜೆ ಆಚರಿಸಲಾಯಿತು.
ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಎರಡು ಲಾರಿಗಳ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.